ಕೋಲಾರ (ಸೆ 2): ಕೋವಿಡ್ ಲಸಿಕೆ ಬಗ್ಗೆ ಕೆಲವರು ತಪ್ಪು ತಿಳಿವಳಿಕೆ ಮೂಡಿಸುತ್ತಿದ್ದರೂ, ಜನರಿಗೆ ಲಸಿಕೆ ಮೇಲೆ ಸಂಪೂರ್ಣ ನಂಬಿಕೆ, ವಿಶ್ವಾಸ ಬಂದಿದೆ. ಲಸಿಕೆ ಪಡೆಯಲು ಜನರು ಸಾಲು ಸಾಲಾಗಿ ಬರುತ್ತಿದ್ದು, ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೋಲಾರದಲ್ಲಿ ಮುದುವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ 35 ಸಾವಿರ ಕೋಟಿ