ರಾಯಚೂರು : ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೇಶದ್ರೋಹಿಗಳು ಸಂತಸ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬುದ್ಧಿಜೀವಿಗಳು ಹೇಳಿಕೆ ನೀಡುವಾಗ ಅವರ ನಾಲಗೆ ಮೇಲೆ ಹಿಡಿತವಿರಿಲಿ. ಇಲ್ಲದಿದ್ದರೆ ನಾಲಿಗೆ ಕತ್ತರಿಸಬೇಕಾಗುತ್ತದೆ ಎಂದು ಸುರಪುರ ಶಾಸಕ ರಾಜುಗೌಡ ಎಚ್ಚರಿಕೆ ನೀಡಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವಿಗೆ ಸಂತಾಪ ಸೂಚಿಸಿ, ಬಳಿಕ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ಘೋರ ಉಗ್ರರ ದಾಳಿಯಲ್ಲಿ ವೀರ ಯೋಧರು