ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಮೂಡಿರುವ ಸಂದಿಗ್ಧತೆಗಳ ಕುರಿತು ಸ್ಪೀಕರ್ ರಮೇಶ್ ಕುಮಾರ್ ಮಾಧ್ಯಮಗಳೊಂದಿಗೆ ತಮ್ಮದೇ ದಾಟಿಯಲ್ಲಿ ಮಾತನಾಡಿದ್ದಾರೆ.ಒಂದೆಡೆ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಟೀಕೆ ಮಾಡುತ್ತಿದ್ದರೆ, ಆ ಟೀಕಾಕಾರರ ಬಗ್ಗೆ ರಮೇಶ್ ಕುಮಾರ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ಗಾಂಧೀಜಿಯನ್ನೇ ಕೊಂದ ದೇಶವಿದು. ಇನ್ನು ನನ್ನನ್ನು ಬಿಡ್ತಾರಾ? ನಮಸ್ಕಾರ ಮಾಡುವ ನೆಪದಲ್ಲಿ ಕೈಯಲ್ಲಿ ಪಿಸ್ತೂಲ್ ಹಿಡಿದು ಶೂಟ್ ಮಾಡಿದರು. ಗಾಂಧೀಜಿಯನ್ನು ಕೊಲ್ಲಲು ಪಿಸ್ತೂಲ್ ಬೇಕಿತ್ತಾ?