ಅದು ಏಷ್ಯಾ ಖಂಡದಲ್ಲೇ ಹೆಸರುವಾಸಿಯಾದ ಎರಡನೇ ಅತಿದೊಡ್ಡ ಐತಿಹಾಸಿಕ ಕೆರೆ. ತನ್ನ ಸುತ್ತ ಮುತ್ತಲ ನೂರಾರು ಗ್ರಾಮಗಳು, ನಾಲ್ಕಾರು ನಗರಗಳಿಗೆ ಕುಡಿಯು ನೀರೊದಗಿಸುತ್ತಿರು ಆ ಕೆರೆ ಲಕ್ಷಾಂತರ ರೈತರ ಜೀವನಾಡಿ ಕೂಡ ಆಗಿದೆ. ಆದ್ರೆ ಇತ್ತೀಚೆಗೆ ಕೆರೆಗೆ ಊಳು ತುಂಬಿರೋದ್ರಿಂದ ಸಾಕಷ್ಟು ನೀರು ಸಂಗ್ರಹ ಆಗ್ತಿಲ್ಲ. ಹೀಗಾಗಿ ಸರ್ಕಾರದ ನೆರವನ್ನು ಯಾಚಿಸದೇ ಆ ಐತಿಹಾಸಿಕ ಕೆರೆಯ ಪುನರುಜ್ಜೀವನಕ್ಕೆ ಸದ್ಧರ್ಮ ನ್ಯಾಯಪೀಠ ಮುಂದಾಗಿದ್ದು, ಸಿನಿಮಾ ನಟ -ನಟಿಯರು ಸೇರಿದಂತೆ ಸಾವಿರಾರು ಭಕ್ತರು ಸ್ವಯಂಸೇವಕರಾಗಿ ಮುಂದೆ ಬಂದಿದ್ದಾರೆ.