ಬೆಂಗಳೂರು : ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆ ಮಸೂದೆ ವಿಧಾನಸಭೆಯಲ್ಲಿ ಪಾಸಾಗಿದೆ. ಮಸೂದೆ ವಿರೋಧಿಸಿ ವಿಪಕ್ಷ ಕಾಂಗ್ರೆಸ್ ಸಭಾತ್ಯಾಗ ನಡೆಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರಿಂದ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಇದರ ನಡುವೆಯೇ ಧ್ವನಿಮತದಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಕುರಿತು ಪ್ರತ್ಯೇಕ ಆಯೋಗ ರಚಿಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ)