ಬಿಬಿಎಂಪಿ ಶಾಲೆಗಳ ಗುತ್ತಿಗೆ ಆಧಾರದ ಶಿಕ್ಷಕರು ಭೇಟಿಯಾದ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಗುತ್ತಿಗೆ ಶಿಕ್ಷಕರು ಬಂದು ಭೇಟಿ ಮಾಡಿದ್ದಾರೆ .ಅವರು ನಮ್ಮನ್ನೇ ಮುಂದುವರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.ನಮ್ಮ ಶಿಕ್ಷಣ ಇಲಾಖೆಯವರು ಯಾಕೆ ಜವಾಬ್ದಾರಿ ತೆಗೆದುಕೊಂಡಿದ್ದೇವೆ ಎಂದರೆ ಬಿಬಿಎಂಪಿ ಶಾಲೆಗಳ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿದೆ.ಕೆಲವು ಸೆಕ್ಯೂರಿಟಿ ಏಜೆನ್ಸಿಗಳು ಟೀಚರ್ಸ್ಗಳನ್ನು ಪೂರೈಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ಇದೆ.ಯಾರ್ಯಾರು ಏನೇನು ಕೆಲಸ ಮಾಡಬೇಕು ಅದನ್ನೇ ಮಾಡಬೇಕು.ಸೆಕ್ಯೂರಿಟಿ ಏಜೆನ್ಸಿಯವರು ಶಿಕ್ಷಕರನ್ನು ಒದಗಿಸುವ ಕೆಲಸ ಆಗಬಾರದು