ಮಂಡ್ಯ -ಕೆರೆಗೋಡು ಗ್ರಾಮದಲ್ಲಿ ಪ್ರತಿಯೊಂದು ಅಂಗಡಿ ಮುಗ್ಗಟ್ಟು, ಮನೆಗಳು ಹಾಗೂ ವಿದ್ಯಾಸಂಸ್ಥೆಗಳ ಮೇಲೆ ಕೇಸರಿ ಧ್ವಜ ಹಾರಿಸುವ ಮೂಲಕ ಹಿಂದೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಜ.26 ರಂದು ಹನುಮಧ್ವಜ ಹಾರಿಸಿದ ಪ್ರಕರಣ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಡುವೆ ವಿವಾದವನ್ನೆಬ್ಬಿಸಿದೆ. ಈ ನಡುವೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕೆರೆಗೋಡು ಗ್ರಾಮದಲ್ಲಿ ಮನೆಮನೆಗೂ ಹನುಮಧ್ವಜ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಕೆರೆಗೋಡು ಗ್ರಾಮದಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸ್