ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ ತುಮಕೂರು ಜಿಲ್ಲೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ನಿವೇಶನ ಹಂಚಿಕೆ ವಿಷಯವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಜಿಲ್ಲೆಯ ಪಾವಗಡ ತಾಲೂಕಿನ ವದನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚುನಾವಣೆಗೆ ಮುನ್ನ ನಿವೇಶನ ಹಂಚಿಕೆ ಪಟ್ಟಿಯನ್ನು ಜೆಡಿಎಸ್ ಕಾರ್ಯಕರ್ತರು ನೀಡಿದ್ದರು ಎನ್ನಲಾಗಿದೆ.ಆದರೆ