ಕೊರೊನಾ ಕಳೆದ ಮೂರು ವರ್ಷಗಳಿಂದ ರಾಜ್ಯದ ಮನೆ ಮನೆಗಳಲ್ಲಿ ಮನೆಯ ಮಗನಂತೆ ಒಕ್ಕರಿಸಿಕೊಂಡು, ನೂರಾರು ಜನರ ಬದುಕು ಬಿದಿಗೆ ತಂದಿದ್ದಾನೆ. ಇನ್ನೇನು ಕಡಿಮೆ ಆಯ್ತು ಅನ್ನುವಷ್ಟರಲ್ಲಿ ಇದೀಗ ಮತ್ತೆ ಸುಂಟರಗಾಳಿಯಂತೆ ದೇಶಾದ್ಯಂತ ವ್ಯಾಪಿಸಿದ್ದಾನೆ. ಇನ್ನೂ ಜನರು ಮಾತ್ರ ಕೊರೊನಾ ಇಲ್ಲ ಎಂದು ನಿರ್ಲಕ್ಷ ವಹಿಸಿದ್ದು, ಆರೋಗ್ಯ ಇಲಾಖೆ ಮತ್ತೆ ದಂಡ ಅಸ್ತ್ರ ಪ್ರಯೋಗಕೆ ಮುಂದಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.