ಅಷ್ಟ ಮಠಗಳ ನಡುವಿನ ಮುಸುಕಿನ ಗುದ್ದಾಟ ಮತ್ತೆ ಭುಗಿಲೆದ್ದಿದೆ. ಶೀರೂರು ಮಠದ ಪಟ್ಟದ ದೇವರನ್ನು ಹಿಂದಿರುಗಿಸಲು ಪರ್ಯಾಯ ಪಲಿಮಾರು ಮಠಾಧೀಶರು ನಿರಾಕರಿಸುವುದರೊಂದಿಗೆ ಶೀರೂರು ಮಠದೊಂದಿಗಿನ ಸಂಘರ್ಷ ತೀವ್ರತೆಯನ್ನು ಪಡೆದುಕೊಂಡಿದೆ.ಶೀರೂರು ಮಠಕ್ಕೆ ಶಿಷ್ಯ ಸ್ವೀಕಾರ ಮಾಡದೇ ಪಟ್ಟದ ದೇವರನ್ನು ಹಿಂದಿರುಗಿಸುವುದಿಲ್ಲ ಎಂದು ಪಲಿಮಾರು ಶ್ರೀಗಳ ನಿಲುವಿಗೆ ಇತರ ಮಠಾಧೀಶರು ಕೂಡಾ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಈ ವಿವಾದ ಮತ್ತಷ್ಟು ಕಗ್ಗಂಟಾಗಿದೆ. ನಿನ್ನೆ ಪೇಜಾರ ಮಠದ ವಿಶ್ವೇಶ ತೀರ್ಥರ ನೇತೃತ್ವದಲ್ಲಿ ನಡೆದ