ಅಷ್ಟ ಮಠಗಳ ನಡುವಿನ ಮುಸುಕಿನ ಗುದ್ದಾಟ ಮತ್ತೆ ಭುಗಿಲೆದ್ದಿದೆ. ಶೀರೂರು ಮಠದ ಪಟ್ಟದ ದೇವರನ್ನು ಹಿಂದಿರುಗಿಸಲು ಪರ್ಯಾಯ ಪಲಿಮಾರು ಮಠಾಧೀಶರು ನಿರಾಕರಿಸುವುದರೊಂದಿಗೆ ಶೀರೂರು ಮಠದೊಂದಿಗಿನ ಸಂಘರ್ಷ ತೀವ್ರತೆಯನ್ನು ಪಡೆದುಕೊಂಡಿದೆ.