ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಭೂ ಕುಸಿತದಿಂದ ಪ್ರಮುಖ ಯಾತ್ರಾ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಆಗಿವೆ. ಇದರ ಬಿಸಿ ದೇವಸ್ಥಾನಗಳಿಗೂ ಮುಟ್ಟಿದ್ದು, ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಮುಖಗೊಂಡಿದೆ. ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಬಹಳಷ್ಟು ಕಡಿಮೆ ಆಗಿದೆ. ಈ ಬಾರಿ ಸುರಿದ ಭಾರಿ ಮಳೆಗೆ ಭೂ ಕುಸಿತದಿಂದ ಶಿರಾಡಿ ಘಾಟಿ ರಸ್ತೆ - ಸಂಪಾಜೆ ಘಾಟಿ ರಸ್ತೆ ಸಂಚಾರ