ಬಮೂಲ್ ಸಂಸ್ಥೆ ಹಾಲು ದರದಲ್ಲಿ 2 ರೂಪಾಯಿ ಕಡಿಮೆ ಮಾಡಿರುವುದನ್ನು ವಿರೋಧಿಸಿ ನೂರಾರು ಹಾಲು ಉತ್ಪಾದಕರು ಹಾಗೂ ಗೋ ಪಾಲಕರು ಆನೇಕಲ್ ಡೈರಿ ಮುಂಭಾಗ ಪ್ರತಿಭಟನೆ ನಡೆಸಿದರು.ಗೋಪಾಲಕರ ಅಧ್ಯಕ್ಷ ರಮೇಶ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ನೂರಾರು ಹಾಲು ಉತ್ಪಾದಕರು ಹಾಗೂ ಗೋ ಪಾಲಕರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದರು.ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಬಮೂಲ್ ಅಧ್ಯಕ್ಷ ಬಿ.ಜಿ. ಅಂಜನಪ್ಪ ಸ್ಥಳಕ್ಕೆ ಬೇಟಿ ನೀಡಿದರು. ಪ್ರತಿಭಟನಾ