ಬೆಂಗಳೂರು (ಆ. 24): ಒಂದೂವರೆ ವರ್ಷಗಳ ಬಳಿಕ ಇಂದು ರಾಜ್ಯದಲ್ಲಿ ಭೌತಿಕ ಶಾಲೆ ಆರಂಭವಾಗಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದಾಗಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ನಾನು ಮಲ್ಲೇಶ್ವರದ ಶಾಲೆ ಕಾಲೇಜಿಗೆ ಭೇಟಿ ನೀಡಿದ್ದೆ. ಮಕ್ಕಳು ಕೂಡ ಅತ್ಯಂತ ಉತ್ಸುಕರಾಗಿದ್ದಾರೆ. ಆನ್ಲೈನ್ ಕಲಿಕೆಗಿಂತ ಶಾಲೆಗೆ ಬರುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.