ಕಲ್ಯಾಣ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಎಲ್ಲಾ ಕಡೆ ಬಿಜೆಪಿ ಸುನಾಮಿ ಇದೆ.ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಕ್ಕೆ ಇಷ್ಟೆಲ್ಲಾ ಕೆಲಸ ಮಾಡೋಕೆ ಸಾಧ್ಯ.ಶಾಸಕನಾಗಿ, ಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ನಿಮ್ಮ ಪರವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದಲ್ಲಿ ಯುವಕರಿಗೆ ಉದ್ಯೋಗ ಕೊಡುವುದು ನನ್ನ ಗುರಿ. ನಾವೆಲ್ಲಾ. ಶಾಂತಿ ಸೌಹಾರ್ಧತೆ ಕಾಪಾಡಿಕೊಂಡು ಹೋಗಬೇಕು..