ತುಮಕೂರು : ಬೃಹತ್ ಗಾತ್ರದ ಬಜೆಟ್ ಮಂಡನೆಯಾಗುತ್ತಿದೆ ಎಂದರೆ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ ಎಂದರ್ಥ ಎಂದು ವಿಶ್ಲೇಷಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ದಿವಾಳಿಯಾಗಲಿದೆ ಎನ್ನುವವರಿಗೆ ನಮ್ಮ ಬಜೆಟ್ ಉತ್ತರ ನೀಡಲಿದೆ.2024-25 ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಪಟ್ಟಿಯನ್ನು ಮಂಡಿಸಲಾಗುವುದು ಎಂದು ತುಮಕೂರಿನಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.