ಹುಬ್ಬಳ್ಳಿ : ಜೆಡಿಎಸ್ ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಬಿಜೆಪಿ ಬಿ ಟೀಂ ಅಥವಾ ಒಳ ಒಪ್ಪಂದ ಎನ್ನುವ ಸುಳ್ಳು ಆರೋಪಗಳನ್ನು ಬಿಟ್ಟರೆ ನಮ್ಮ ಹಾಗೂ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.