ಸಂದೇಶ್ ಖಲಿಯಲ್ಲಿ ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಶೇಖ್ ಶಾಜಹಾನ್ ನನ್ನು ಬಂಧಿಸಲು ತೆರಳಿದ್ದ ವೇಳೆ ಇಡಿ ಅಧಿಕಾರಿಗಳ ಮೇಲೆ 200 ಜನರ ಗುಂಪೊಂದು ಶುಕ್ರವಾರ ಭೀಕರ ದಾಳಿ ನಡೆಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಟಿಎಂಸಿ ನಾಯಕ ಕುನಾಲ್ ಘೋಷ್ ಪ್ರತಿಕ್ರಿಯೆ ನೀಡಿದ್ದು, ಇಡಿ ಅಧಿಕಾರಗಳ ಮೇಲೆ ನಡೆದ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ.