ಹುಬ್ಬಳ್ಳಿ: ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಒಲಿಂಪಿಕ್ ಕ್ರೀಡಾಕೂಟದ ಕುಸ್ತಿ ಸ್ಪರ್ಧೆ ವೇಳೆ, ಬಲತೊಡೆಯ ಮೂಳೆ ಮುರಿದು ತೀವ್ರವಾಗಿ ಗಾಯಗೊಂಡಿದ್ದ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಪೈಲ್ವಾನ್ ಸಂತೋಷ ದ್ಯಾಮಣ್ಣ ಹೊಸಮನಿ(೨೧) ಚಿಕಿತ್ಸೆ ಫಲಕಾರಿಯಾಗದೆ ಅವರಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಮಂಗಳವಾರ ಸಾವನ್ನಪ್ಪಿದ್ದಾರೆ. ಸಂತೋಷ ಅವರು ದಾವಣಗೆರೆಯ ಪೈಲ್ವಾನ್ ಮಹಮ್ಮದ್ ಅಲಿ ಜೊತೆಗೆ ಕುಸ್ತಿ ಆಡುವಾಗ ಗಾಯಗೊಂಡಿದ್ದರು. ತಕ್ಷಣ ಚಿಕಿತ್ಸೆಗಾಗಿ ಅವರನ್ನು ಕಿಮ್ಸ್ಗೆ ದಾಖಲಿಸಲಾಗಿತ್ತು. ಕಳೆದೊಂದು ವಾರದಿಂದ ಸಂತೋಷ ಅವರಿಗೆ