ಬೆಂಗಳೂರು : ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಡಾ.ಅಜಯ್ ಸಿಂಗ್ ನನಗೆ ಅಸಮಾಧಾನ ಇರೋದು ನಿಜ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕುಟುಂಬದವರ ಜೊತೆ ಪ್ರವಾಸಕ್ಕೆ ಹೋಗಿದ್ದೆ. ಹೀಗಾಗಿ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇಂದು ವೇಣುಗೋಪಾಲ್ ರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.