ಬೆಂಗಳೂರು: ಹಲವು ದಿನಗಳಿಂದ ಮಳೆ ಕಾಣದೆ ವಿಪರೀತ ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಜನರಿಗೆ ಇಂದು ಮಳೆರಾಯ ತಂಪನ್ನೆರೆದಿದ್ದಾನೆ. ಕೊರೋನಾ ಆರ್ಭಟದ ನಡುವೆ ತಣ್ಣಗಾಗಿದ್ದ ಮಳೆ ಭಾನುವಾರ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸುರಿದಿದೆ. ಕೆಲವೆಡೆ ಧಾರಾಕಾರವಾಗಿ ಮಳೆಯಾಗಿದ್ದರೆ ಇನ್ನು ಹಲವೆಡೆ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆ ಆರಂಭವಾದ ಮಳೆ ಸತತ ಒಂದು ಗಂಟೆಗಳಿಗೂ ಹೆಚ್ಚು ಕಾಲ ಸುರಿಯಿತು.