ಚಿಕ್ಕಮಗಳೂರು ಜ.೭ ಕಸದ ವಿಲೇವಾರಿ ಗುಂಡಿಯನ್ನು ಗ್ರಾಮದಿಂದ ದೂರದ ಜಾಗದಲ್ಲಿ ತೆಗೆಯುವಂತೆ ಒತ್ತಾಯಿಸಿ ಹಲಸುಮನೆ ಗ್ರಾಮಸ್ಥರು ತಾಲ್ಲೂಕಿನ ಬಸ್ಕಲ್ ಗ್ರಾಮ ಪಂಚಾಯಿತಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.