ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರಿಂದ ಕೋವಿಡ್ ಪ್ರಕರಣಗಳು ಹೆಚ್ಚಿದ್ದು, ಇದರ ನಿಯಂತ್ರಣಕ್ಕಾಗಿ ವಾಚ್ ಆ್ಯಪ್ ಮೊರೆ ಹೋಗಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಇದುವರೆಗೆ 15,440 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಇದರಲ್ಲಿ 57 ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಡಿಸಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳಿರುವವರಿಂದ ಗಂಟಲು ದ್ರವದ ಮಾದರಿ ಸಂಗ್ರಹಿಸಲು ಕ್ರಮ ವಹಿಸಲಾಗಿದ್ದು, ಕೋವಿಡ್ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕೋವಿಡ್ ತಪಾಸಣಾ