ಪ್ರವಾಹದಲ್ಲಿ ಸಿಲುಕಿಕೊಂಡಿರೋ ಜನರಿಗೆ ಹಾಗೂ ನೆರೆ ಸಂತ್ರಸ್ಥರಿಗೆ ಹಾಲಿನ ಪ್ಯಾಕೆಟ್ ನಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರಿಗೆ ಆಹಾರ ಪೊಟ್ಟಣಗಳ ಜತೆ ಬಾಟಲ್ ಗಳ ಬದಲಿಗೆ ನಂದಿನಿ ಹಾಲಿನ ಖಾಲಿ ಪ್ಯಾಕೆಟ್ ಗಳಲ್ಲಿ ಕುಡಿಯುವ ಶುದ್ಧ ನೀರು ತುಂಬಿಸಿ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.ಹೆಲಿಕಾಪ್ಟರ್ ಮೂಲಕ ಆಹಾರ ಪೊಟ್ಟಣಗಳ ಜತೆ ನೀರಿನ ಬಾಟಲ್ ಗಳನ್ನು ವಿತರಿಸಲಾಗುತ್ತಿತ್ತು. ಬಾಟಲ್ ಭಾರವಾಗಿರುವುದರಿಂದ ಮೇಲಿನಿಂದ ಎಸೆದಾಗ ಜನರಿಗೆ ಗಾಯಗಳಾಗುವ ಸಾಧ್ಯತೆಗಳು ಕಂಡುಬಂದಿವೆ.