ಬಿಜೆಪಿ ಸರ್ಕಾರದ ಒಳಸಂಚು, ಷಡ್ಯಂತ್ರವನ್ನು ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನವರು ಸಮರ್ಥವಾಗಿ ಎದುರಿಸಲಿದ್ದಾರೆ. ನಾವು ಎಲ್ಲದ್ದಕ್ಕೂ ಸಿದ್ಧವಾಗಿದ್ದೇವೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯ ( ಇ.ಡಿ.) ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ವಿಚಾರವಾಗಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಯಾವುದೇ ಕಾರಣಕ್ಕೂ ಅವರಿಗೆ ಹೆದರುವುದಿಲ್ಲ,