ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಕಾಂಗ್ರೆಸ್ ಸರಕಾರವೇ ಕಾರಣವಾಗಿದೆ ಎಂದು ಆರೋಪಿಸಿದರು. ಸರಕಾರ ಬರನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬರಗಾಲ ಪೀಡಿತರನ್ನು ಭೇಟಿ ಮಾಡುವ ಸೌಜನ್ಯ ಕೂಡಾ