ಹಾವೇರಿ : ಮೋದಿ ವಿರುದ್ಧ ಮಾತಾಡಿದರೆ ದೇಶದ್ರೋಹಿ. ಸರ್ಕಾರದ ವಿರುದ್ಧ ಮಾತಾಡಿದರೆ ದೇಶದ್ರೋಹಿ ಅಂತಾರೆ ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಜರಿದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಮಾತನಾಡುತ್ತಾ ರಾಜ್ಯ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ರೈತರು ಚಳವಳಿ ಮಾಡಿದ್ರೆ ಕಾರು ಹರಿಸಿ ಸಾಯಿಸುತ್ತಾರೆ. ಕೇಂದ್ರದ ಮಂತ್ರಿ ಮಗ ಕಾರು ಹರಿಸಿ ರೈತರನ್ನ ಸಾಯಿಸಿದ. ಇವರನ್ನ ಲಜ್ಜೆಗೆಟ್ಟವರು, ಕೊಲೆಗಡುಕರು