ಬೆಂಗಳೂರು : ತುಮಕೂರು ಕ್ಷೇತ್ರ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಡಿಸಿಎಂ ಡಾ.ಜಿ. ಪರಮೇಶ್ವರ ಅವರು ಕ್ಷೇತ್ರ ತಪ್ಪಿಸುವುದರಿಂದ ಯಾರೋ ಒಬ್ಬರಿಗೆ ಸ್ಕೋರ್ ಹೆಚ್ಚಾಗುವುದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿದ್ದ ತುಮಕೂರು ಕ್ಷೇತ್ರವನ್ನು ಕ್ಷೇತ್ರ ಹಂಚಿಕೆ ಸಂದರ್ಭದಲ್ಲಿ ಜೆಡಿಎಸ್ ಗೆ ಬಿಟ್ಟು ಕೊಟ್ಟಾಗ ನನಗೆ ಆತಂಕ, ಅಸಮಾಧಾನ ಆಗಿದ್ದು ನಿಜ. ಆದರೆ ಉದ್ದೇಶಪೂರ್ವಕವಾಗಿ ಕ್ಷೇತ್ರ ಕೈ ತಪ್ಪಿದೆ ಎಂದು ಅನಿಸುತ್ತಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ತುಮಕೂರು