ಬೆಂಗಳೂರು : ಕುಮಾರಸ್ವಾಮಿ ಅವರ ಸರ್ಕಾರ ಅವಧಿಯಲ್ಲಿ ಜಾರಿಯಾಗಿರುವ ಕೆಲ ಯೋಜನೆಗಳನ್ನು ಯಡಿಯೂರಪ್ಪ ಅವರ ಸರ್ಕಾರ ತಡೆಹಿಡಿಯಲು ಮುಂದಾದ ಹಿನ್ನಲೆಯಲ್ಲಿ ಇದೀಗ ಮಾಜಿ ಸಿಏಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ