ಮಂಗಳೂರು : ದಕ್ಷಿಣ ಕನ್ನಡದ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರು,’ ರಾಜ್ಯದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಹಿರಿಯ ನಾಯಕರದು ಇದೇ ಸ್ಥಿತಿಯಾಗಿದೆ’ ಎಂದು ತಮ್ಮ ನೋವನ್ನು ರಾಹುಲ್ ಗಾಂಧಿ ಅವರ ಬಳಿ ಹೇಳಿ ಕಣ್ಣೀರು ಹಾಕಿದ್ದು, ಅವರನ್ನು ರಾಹುಲ್ ಗಾಂಧಿ ಅವರು ಸಂತೈಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.