ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿರುವ ಕಂಪ್ಯೂಟರ್ ವಿತರಣೆಯಲ್ಲಿ ಭಾರಿ ಭ್ರಷ್ಟಾಚಾರವಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ವಿಪಕ್ಷಗಳು ಆರೋಪವನ್ನು ಸಾಬೀತುಪಡಿಸಿದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ನಲ್ಲಿ ಬಿಜೆಪಿ ಮುಖಂಡರಾದ ರಘುನಾಥ್ ಮಲ್ಕಾಪುರೆ, ಕೆ.ಎಸ್.ಈಶ್ವರಪ್ಪ ಮಾಡಿದ್ದ ಆರೋಪಗಳಿಗೆ ರ್ರತಿಕ್ರಿಯೆ ನೀಡಿದ್ದಾರೆ. ಅವರು ಕಂಪ್ಯೂಟರ್ ಪೂರೈಕೆಯಲ್ಲಿ ಅಕ್ರಮಗಳು ನಡೆದಿವೆ