ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಆಪ್ತರು ಭೇಟಿ ಮಾಡಿ ವಿಪಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಹಿಂಡೆಯುವಂತೆ ಒತ್ತಾಯಿಸಿದ್ದಾರಂತೆ. ಇದಕ್ಕೆ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಾಸು ಪಡೆಯಲ್ಲ ಎಂದಿದ್ದಾರಂತೆ. ಅಷ್ಟೇ ಅಲ್ಲದೇ ನಾನು