ರಾಜ್ಯದಲ್ಲಿ ರಚನೆಯಾಗಿರುವ ಸಮ್ಮಿಶ್ರ ಸರಕಾರ ಪೂರ್ವ ಕ್ಕೆ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಅಷ್ಟೇ ಮೂರು ತಿಂಗಳ ಕಡಿಮೆ ಆರು ತಿಂಗಳ ಹೆಚ್ಚು ಎನ್ನುವಷ್ಟರಲ್ಲಿ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಬಾಗಲಕೋಟೆಯಲ್ಲಿ ಶಾಸಕ ಡಾ.ವೀರಣ್ಣ ಚರಂತಿಮಠ ಸಂವಾದದಲ್ಲಿ ಹೇಳಿದರು. ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿ, ಸಚಿವ ಸಂಪುಟ ರಚನೆಯಾಗುವಷ್ಟರಲ್ಲಿ ಕೆಲವೊಂದು ಬದಲಾವಣೆಯಾಗಿ ಬಿಜೆಪಿ ಸರಕಾರ ರಚನೆಗೆ ಪೂರಕವಾಗುತ್ತೆ.