ಕಳೆದ ಐದಾರು ವರ್ಷಗಳಿಂದ ರಾಕಿಭಾಯ್ ಹತ್ತು ಹಲವು ಜನಪರ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೆರೆಗಳನ್ನು ಸಂರಕ್ಷಿಸಿದ್ದಾರೆ. ಅನೇಕ ಸಂದರ್ಶನಗಳಲ್ಲಿ ಯಶ್, ‘ನನ್ನ ಗುರಿ ಬೇರೆ. ನಾನು ತಲುಪಬೇಕಿರುವ ಕೇಂದ್ರಸ್ಥಾನ ಬೇರೆ’ ಎನ್ನುವ ಅರ್ಥದಲ್ಲಿ ಅನೇಕ ಬಾರಿ ಮಾತಾಡಿದ್ದೂ ಇದೆ. ಹಾಗಾಗಿ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಮುನ್ನೆಲೆಗೆ ಬಂದಿದೆ. ಅದಕ್ಕೆ ಪೂರಕ ಎನ್ನುವಂತೆ ಯಶ್ ನಿನ್ನೆಯಷ್ಟೇ