ಪಿಎಸ್ಐ ನೇಮಕಾತಿ ಹಗರಣ, ಕಾಮಗಾರಿಗಳಲ್ಲಿ ಶೇ.40 ಪರ್ಸೆಂಟ್ ಕಮಿಷನ್ ದಂಧೆ ಆರೋಪಗಳ ನಡುವೆ ಸಿಎಂ ಆಗಲು 2,500 ಕೋಟಿ, ಸಚಿವರಾಗಲು 100 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದಿಲ್ಲಿಯಿಂದ ಬಂದಿದ್ದವರು ಹೇಳಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ.. ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಪಾಟೀಲ್ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಶಿಫಾರಸು