ಕಾರವಾರ (ಜು. 11): ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ ಬಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಾರವಾರಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಜುಲೈ 16ರಂದು ನಗರಕ್ಕೆ ಸಿಎಂ ಆಗಮಿಸಲಿರುವ ಸಿಎಂ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳೆದ ಮಾರ್ಚ್ ತಿಂಗಳನಲ್ಲಿಯೇ ಜಿಲ್ಲೆಯ ಶಾಸಕರು, ಉಸ್ತುವಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಲಿಖಿತ ಮನವಿ ಮಾಡಿ, ಕ್ಷೇತ್ರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸುವಂತೆ ಕೋರಿದ್ದರು.