ಸಶಕ್ತ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ನಡೆಸುತ್ತಿರುವ ನಿರಶನ ಮೂರನೇ ದಿನಕ್ಕೆ ಕಾಲಿರಿಸಿದ್ದು, ನಾಳೆ ಕೇಂದ್ರ ಸರಕಾರ ರಾಜ್ಯಸಭೆಯಲ್ಲಿ ಲೋಕಪಾಲ ಮಸೂದೆ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಉಂಟು ಮಾಡಿದಾಗ ಅಧಿವೇಶನವನ್ನು ಮುಂದಕ್ಕೆ ಹಾಕಲು ಯುಪಿಎ ಸರಕಾರ ಯೋಜನೆ ರೂಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.