ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಜನರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ಭಾರತದ ಪ್ರಧಾನಮಂತ್ರಿಗಳ ವಿರುದ್ಧವೇ 420 ಕೇಸು ದಾಖಲಿಸಲಾಗಿದೆ. ಪ್ರಧಾನಿಯ ಜೊತೆಗೆ ಕೇಂದ್ರ ಗೃಹ ಸಚಿವರ ಮೇಲೂ ದೂರು ದಾಖಲಾಗಿದ್ದು, ಸಚಿವ ಸುಶೀಲ್ ಕುಮಾರ್ ಶಿಂಧೆಯವರೂ ಕೂಡ ಜನರ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನ್ಯಾಯಾಲಯದಲ್ಲಿ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ.
ಭಾರತ ರತ್ನ ಪ್ರಶಸ್ತಿಯನ್ನು ನೀಡುವ ಸಮಯದಲ್ಲಿ ಹಾಕಿ ಮಾಂತ್ರಿಕ ಧ್ಯಾನಚಂದ್ ಅವರ ಹೆಸರನ್ನು ಕೈಬಿಡುವ ಮೂಲಕ ಪ್ರಧಾನಿ, ಗೃಹ ಸಚಿವ ಶಿಂಧೆ, ಕೇಂದ್ರ ಕ್ರೀಡಾ ಸಚಿವ ಜಿತೇಂದ್ರ್ ಸಿಂಗ್ ಹಾಗೂ ಕ್ರೀಡಾ ಇಲಾಖೆ ಕಾರ್ಯದರ್ಶಿಯವರು ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಸ್ಥಳೀಯ ವಕೀಲ ಸುಧೀರ್ ಕುಮಾರ್ ಓಜಾ ದೂರಿದ್ದಾರೆ.