ರಾಂಚಿ : ಗ್ರಾಮದಲ್ಲಿ ವಾಸವಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಅದೇ ಗ್ರಾಮದ ಐವರು ಯುವಕರು ಅಪಹರಿಸಿ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನ ಗುಮ್ಲಾದ ಚೈನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಬಾಲಕಿಯ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳು ದೂರು ದಾಖಲಿಸದಂತೆ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಗ್ರಾಮ ಪಂಚಾಯಿತಿ ಮುಖಂಡರು ಕೂಡ ಬಾಲಕಿ ಕುಟುಂಬಸ್ಥರಿಗೆ ದೂರು ದಾಖಲಿಸದಂತೆ ಬೆದರಿಕೆ ಹಾಕಿದ್ದಾರೆ