ಪಾಟ್ನಾ : ಬಿಹಾರದಲ್ಲಿ ಕಳೆದೊಂದು ವಾರದಿಂದ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶೇಷ ತನಿಖಾ ತಂಡ ಸರನ್ ಜಿಲ್ಲೆಯಲ್ಲಿ ಕಳ್ಳಾಭಟ್ಟಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದೆ.ಆತನಿಂದ 2.17 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ.ಕಳ್ಳಾಭಟ್ಟಿ ಸೇವಿಸಿ ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಶ್ರಖ್ ಹಾಗೂ ಇಶುಪುರ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 2