ಬೆಂಗಳೂರು(ಸೆ.2) : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಹುತೇಕ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿವೇಶನದ ನಂತರ ರಾಜ್ಯ ಪ್ರವಾಸ ಮಾಡಲು ಸಿದ್ಧತೆ ನಡೆಸಿದ್ದಾರೆ. ಇದೇ 13ರಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಬಳಿಕ ಯಡಿಯೂರಪ್ಪ ರಾಜ್ಯಾದ್ಯಂತ ಪಕ್ಷ ಸಂಘಟನೆಯ ಹೆಸರಿನಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.