ನವದೆಹಲಿ : ನಾಳೆಯಿಂದ ಮೂರು ದಿನಗಳ ಕಾಲ ಲಡಾಖ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆಗೆ ಭಾರತೀಯ ಸೇನೆ ಸಿದ್ಧತೆ ನಡೆಸಿದೆ.ಪ್ರಮುಖ ಪರ್ವತಾರೋಹಿ, ಪದ್ಮಭೂಷಣ ಪುರಸ್ಕೃತರಾದ ಬಚ್ಚೇಂದ್ರಿಪಾಲ್ ನೇತೃತ್ವದಲ್ಲಿ ಕಳೆದ ಐದು ತಿಂಗಳಿಂದ ಸುದೀರ್ಘ ಹಿಮಾಲಯ ಯಾತ್ರೆ ನಡೆಸಿರುವ 50 ವರ್ಷ ದಾಟಿದ 12 ಮಹಿಳೆಯರ ತಂಡ ಪ್ರಮುಖ ಆಕರ್ಷಣೆ ಆಗಲಿದೆ.ವಿಜಯ್ ದಿವಸ್ ಭಾಗವಾಗಿ ಫಿಟ್@50ಪ್ಲಸ್ ಹೆಸರಿನಲ್ಲಿ ಅರುಣಾಚಲದ ಪಾಂಗ್-ಸೌ ಕಣಿವೆಯಲ್ಲಿ ಈ ಯಾತ್ರೆ ಶುರುವಾಗಿತ್ತು.