ತಿರುವನಂತಪುರಂ : ಪ್ರವಾಸಿ ದೋಣಿ ಮುಳುಗಿ ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.ಸಚಿವ ವಿ.