ಗುವಾಹಟಿ: 'ಪಾಪ ಮಾಡಿದ್ದರೆ ಕ್ಯಾನ್ಸರ್ ಬರುತ್ತದೆ' ಇದನ್ನು ಯಾರೋ ಜ್ಯೋತಿಷಿ ಹೇಳುತ್ತಿದ್ದಾರೆ ಅಂದುಕೊಳ್ಳಬೇಡಿ. ಹೀಗೆ ಹೇಳಿದ್ದು ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಸರ್ಮಾ. ಹೊಸತಾಗಿ ಉದ್ಯೋಗಕ್ಕೆ ಸೇರಿದ ಶಾಲಾಶಿಕ್ಷಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದ್ದಾರೆ.