ಗುವಾಹಟಿ: ಪಾಪ ಮಾಡಿದ್ದರೆ ಕ್ಯಾನ್ಸರ್ ಬರುತ್ತದೆ ಇದನ್ನು ಯಾರೋ ಜ್ಯೋತಿಷಿ ಹೇಳುತ್ತಿದ್ದಾರೆ ಅಂದುಕೊಳ್ಳಬೇಡಿ. ಹೀಗೆ ಹೇಳಿದ್ದು ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಸರ್ಮಾ. ಹೊಸತಾಗಿ ಉದ್ಯೋಗಕ್ಕೆ ಸೇರಿದ ಶಾಲಾಶಿಕ್ಷಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದ್ದಾರೆ. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದು ಪಾಪ. ದೇವರ ನ್ಯಾಯಾಲಯದಲ್ಲಿ ಎಲ್ಲರಿಗೂ ಶಿಕ್ಷೆಯಾಗುತ್ತದೆ. ಈ ಶಿಕ್ಷೆಯ ಫಲವಾಗಿ ಕೆಲವರಿಗೆ ಕ್ಯಾನ್ಸರ್ ಬರುತ್ತದೆ. ಇನ್ನು ಕೆಲವರು ಆಕ್ಸಿಡೆಂಟ್ ಆಗಿ ಸಾಯುತ್ತಾರೆ ಇದೆಲ್ಲವೂ ಅವರವರು ಮಾಡಿದ ಪಾಪದ ಫಲ ಎನ್ನುತ್ತಾರೆ ಸಚಿವ