ಭೂಗತ ಪಾತಕಿ, ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ರಾಜೇಂದ್ರ ಸದಾಶಿವ್ ನಿಖಲ್ಜೆ ಅಲಿಯಾಸ್ ಛೋಟಾ ರಾಜನ್, ನಕಲಿ ಪಾಸ್ ಪೋರ್ಟ್ ಬಳಸಿದ ಪ್ರಕರಣದಲ್ಲಿ ದೋಷಿಯೆಂದು ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಛೋಟಾ ರಾಜನ್ ಸೇರಿ ಅವನಿಗೆ ಸಹಕರಿಸಿದ ಮೂವರು ಸರ್ಕಾರಿ ಅಧಿಕಾರಿಗಳು ದೋಷಿಗಳೆಂದು ವಿಶೇಷ ನ್ಯಾಯಾಧೀಶ ವೀರೇಂದರ್ ಕುಮಾರ್ ಗೋಯಲ್ ತೀರ್ಪಿತ್ತಿದ್ಧಾರೆ.