ಶಿವಮೊಗ್ಗ,ಅ.6 : ಆರ್ಎಸ್ಎಸ್ ಕುರಿತು ಲಘುವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಘದ ಶಾಖೆಗೆ ಬಂದು ಶಿಕ್ಷಣ ಪಡೆಯಲಿ. ಇದರಿಂದ ಅವರಿಗೂ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ವ್ಯಂಗ್ಯಭರಿತ ಸಲಹೆ ನೀಡಿದ್ದಾರೆ.