ಕಾಂಗ್ರೆಸ್ ವಿವಿಧ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗ್ರಾಮಗಳ ಮತ್ತು ಬಡವರ ವಿಕಾಸಕ್ಕೆ ಆದ್ಯತೆ ನೀಡಿ ಎಂದು ಮಹಾತ್ಮಾ ಗಾಂಧಿ ನೀಡಿದ್ದ ಸಲಹೆಯನ್ನು ಬದಿಗೊತ್ತಿದ್ದರಿಂದಲೇ ಅವರಿಗೆ ಈ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.