ನವದೆಹಲಿ(ಆ.09): ಗಣರಾಜ್ಯೋತ್ಸವದ ವೇಳೆ ರೈತರು ಟ್ರಾಕ್ಟರ್ ರಾರಯಲಿ ನಡೆಸಿ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಿರುವ ದೆಹಲಿ ಪೊಲೀಸರು ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಪ್ರವೇಶ ದ್ವಾರದ ಬಳಿ ಹಡಗಿನ ಬೃಹತ್ ಕಂಟೇನರ್ಗಳನ್ನು ಗೋಡೆಗಳಂತೆ ಪೊಲೀಸರು ನಿಲ್ಲಿಸಿದ್ದಾರೆ. ಜೊತೆಗೆ ಕಂಟೇನರ್ಗಳನ್ನು ಅಲಂಕರಿಸಿ, ಬಣ್ಣಗಳನ್ನು ಬಳಿಯಲಾಗಿದೆ. ಜಮ್ಮು- ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ದಾಳಿಯ ಕಾರಣದಿಂದಾಗಿಯೂ ರಾಷ್ಟ್ರ ರಾಜಧಾನಿ