ನವದೆಹಲಿ (ಸೆ. 09) : ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಾಗಲಿರುವ ಹಿನ್ನಲೆ ಈಗಾಗಲೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಎರಡನೇ ಬಾರಿ ಕೂಡ ಬಿಜೆಪಿ ಗೆಲ್ಲುವ ರಣತಂತ್ರ ಹೂಡಿದ್ದು, ಇದಕ್ಕಾಗಿ ಈಗಾಗಲೇ ಕಾರ್ಯ ಆರಂಭಿಸಿದೆ. ಇದೆ ವಿಧಾನಸಭಾ ಚುನಾವಣಾ ಲೆಕ್ಕಾಚಾರವನ್ನು ಗಮನದಲ್ಲಿರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆಯನ್ನು ಉದ್ಘಾಟಿಸುವ ಸಾಧ್ಯತೆ ಇದೆ.